Sunday 11 September 2022

*ಇಂದಿನಿಂದ ಪಕ್ಷಮಾಸ/ಪಿತೃ ಪಕ್ಷ* *ಪಿತೃ ಪಕ್ಷವೆಂದರೇನು ?*

  


🌀ಭಾದ್ರಪದ ಬಹುಳ ಪಾಡ್ಯದಿಂದ ಅಮಾವಾಸ್ಯೆಯ ತನಕ ೧೫ ದಿನಗಳ ಈ ಕಾಲವನ್ನು "ಪಿತೃ ಪಕ್ಷ" "ಪಕ್ಷಮಾಸ" ಎನ್ನುತ್ತಾರೆ.   


🌀ಯಾವ ಶ್ರಾದ್ಧಾಧಿಕಾರಿಗಳು ಈ ಅವಧಿಯಲ್ಲಿ  ಶ್ರಾದ್ಧವನ್ನು ಮಾಡುತ್ತಾರೋ ಅವರಿಗೆ ಪಿತೃಗಳು ಜ್ಞಾನ, ಭಕ್ತಿ, ಸಂಪತ್ತು ಮೊದಲಾದ ಆಶೀರ್ವಾದ ಮಾಡುತ್ತಾರೆ.  ಮಾಡದವರಿಗೆ  ಶಾಪವನ್ನು ನೀಡುತ್ತಾರೆ.  ಪಿತೃಗಳ ಶಾಪದಿಂದ ವಂಶಾಭಿವೃದ್ಧಿ ಆಗುವುದಿಲ್ಲ.


🌀ಮಹಾಭಾರತ ಪುರಾಣದ ಪ್ರಕಾರ ಕರ್ಣ ಯುದ್ಧದಲ್ಲಿ ಹತನಾದಾಗಿ, ಸ್ವರ್ಗ ಸೇರಿದಾಗ ಅವನಿಗೆ ಬಂಗಾರ ಮತ್ತು ಆಭರಣಗಳನ್ನು ಆಹಾರವಾಗಿ ನೀಡಲಾಯಿತು. ಆದರೆ ಕರ್ಣನಿಗೆ ಬೇಕಾಗಿದ್ದು ನಿಜವಾದ ಆಹಾರ.  ಇದರಿಂದ ಬೇಸತ್ತ ಕರ್ಣ ಇಂದ್ರನಲ್ಲಿ ಕೇಳುತ್ತಾನೆ.  ಆಗ ಇಂದ್ರ ಹೇಳುತ್ತಾನೆ “ನೀನು ನಿನ್ನ ಪೂರ್ವಿಕರಿಗೆ ಅವರ ಶ್ರಾದ್ಧದಲ್ಲಿ ಅನ್ನವನ್ನು ದಾನವಾಗಿ ನೀಡಿಲ್ಲ.  ಜೀವಮಾನ ಪೂರ್ತಿ ಬೇಕಾದಷ್ಟು ಬಂಗಾರಾದಿ ಆಭರಣಗಳನ್ನು ದಾನವಾಗಿ ನೀಡಿದ್ದೇ. ಅದಕ್ಕಾಗಿ ನಿನಗೆ ನಿಜವಾದ ಆಹಾರ ದೊರಕುತ್ತಿಲ್ಲ”.  ತನಗೆ ತನ್ನ ಪೂರ್ವಜರ ಬಗ್ಗೆ ಏನೂ ಗೊತ್ತಿಲ್ಲದಿದ್ದರಿಂದ ಯಾವ ಶ್ರಾದ್ಧವನ್ನು ಮಾಡಲಾಗಿಲ್ಲ ಎಂದು ಕರ್ಣ ಹೇಳುತ್ತಾನೆ.  ಇದಕ್ಕಾಗಿ ಅವನಿಗೆ ವಿಶೇಷವಾಗಿ ಪರಿಹಾರ ರೂಪವಾಗಿ ೧೫ ದಿನಗಳ ಕಾಲ ಭೂಲೋಕಕ್ಕೆ ಹೋಗಿ ಶ್ರಾದ್ಧ ಮಾಡಿ ಅವರ ನೆನಪಿನಲ್ಲಿ ಆಹಾರವನ್ನು ದಾನ ಮಾಡಲು ಅನುಮತಿ ನೀಡುತ್ತಾರೆ.  ಆ ಕಾಲಕ್ಕೆ ಪಕ್ಷಮಾಸವೆನ್ನುತ್ತಾರೆ.


🌀ಮಹಾಲಯ ಅಂದರೆ – “ಮಹಾ” – ದೊಡ್ಡ “ಲಯ” – ನಾಶ – ಸಮುದ್ರ ಮಥನ ಸಂದರ್ಭದಲ್ಲಿ ಬಹಳ ಋಷಿಗಳು ಮತ್ತು ದೇವತೆಗಳು ದೈತ್ಯರಿಂದ ಸಂಹರಿಸಲ್ಪಟ್ಟರು.  ಈ ಋಷಿಗಳು ನಮ್ಮ ಪೂರ್ವಜರಾಗಿದ್ದುದರಿಂದ ಅವರ ನೆನಪಿನಲ್ಲಿ ಮಹಾಲಯ ಪಕ್ಷವವನ್ನು ಆಚರಿಸುತ್ತೇವೆ.  ಅದುವೇ ಸರ್ವಪಿತೃ ಅಮಾವಾಸ್ಯೆ.


🌸 *ಪಿತೃಗಳಿಗೆ ತಿಲ ತರ್ಪಣವೇಕೆ ?*


🌀ಎಳ್ಳುಗಳ ಅಭಿಮಾನಿ ದೇವತೆ ಸೋಮ (ಚಂದ್ರ).  ಅವು ಅವನ ವೃದ್ಧಿಗೂ ಕಾರಾಣವಾಗಿವೆ.  ಅವನೇ ಪಿತೃಗಳಿಗೆ ಆಧಾರ.  ಪಿತೃಲೋಕ ಚಂದ್ರನ ಮೇಲ್ಭಾಗದಲ್ಲಿದೆ.  ಚಂದ್ರನ ಕಲೆಗಳೆ ಪಿತೃಗಳಿಗೆ ಆಹಾರ.  ಆದ್ದರಿಂದ ಚಂದ್ರನಿಗೆ ಪ್ರಿಯವಾದ ಎಳ್ಳು ಪಿತೃದೇವತೆಗಳಿಗೂ ಪ್ರಿಯವಾಗಿವೆ.    ಭೂಮಿಯಲ್ಲಿ ಸೂರ್ಯನ ಚಲನೆಗೆ ಅನುಗುಣವಾಗಿ ರಾತ್ರಿ ಹಗಲಾಗುವಂತೆ ಪಿತೃಲೋಕದಲ್ಲೂ ಸೂರ್ಯನ ಚಲನೆಗೆ ಕಾರಣವಾಗಿವೆ.  ಭೂಮಿಯಲ್ಲಿ ೨೪ ಘಂಟೆಗೆ ಒಂದು ದಿನವಾದರೆ ಚಂದ್ರನಲ್ಲಿ ೧೫ ದಿನ ಹಗಲು ೧೫ ದಿನ ರಾತ್ರಿಯಾದರೆ ೧ ದಿನವಾಗುವುದು.  ಶುಕ್ಲಪಕ್ಷದ ಅಷ್ಟಮಿಯಿಂದ ಕೃಷ್ನಪಕ್ಷದ ಅಷ್ಟಮಿಯವತೆಗೆ ಪಿತೃಗಳಿಗೆ ರಾತ್ರಿಯಾದರೆ, ಕೃಷ್ಣಪಕ್ಷದ ಅಷ್ಟಮಿಯಿಂದ ಶುಕ್ಲ ಪಕ್ಷದ ಅಷ್ಟಮಿಯವರೆಗೆ ಹಗಲು.  ಅಂದರೆ ನಮ್ಮ ಒಂದು ತಿಂಗಳು ಪಿತೃಗಳಿಗೆ ಒಂದು ದಿನ.  ಆಗ ಪಿತೃಗಳಿಗೆ ಅಮಾವಾಸ್ಯೆ ನಡು ಮಧ್ಯಾಹ್ನವೆನಿಸುತ್ತದೆ.  ಆದ್ದರಿಂದ ಅಮಾವಾಸ್ಯೆಯಂದು ಪಿತೃಗಳಿಗೆ ತಿಲ ತರ್ಪಣಕ್ಕೆ ಮಹತ್ವ.  ದಕ್ಷಿಣಾಯಣದ ಕನ್ಯಾಮಾಸದಲ್ಲಿ ಸೂರ್ಯನು ಭೂಮಿಗೆ ಅತಿ ಸಮೀಪದಲ್ಲಿರುವುದರಿಂದ ಪಿತೃಪಕ್ಷದಲ್ಲಿ ತರ್ಪಣ ಶ್ರಾದ್ಧಕ್ಕೆ ಹೆಚ್ಚಿನ ಮಹತ್ವವಿದೆ.


🌸 *ದರ್ಬೆಯನ್ನು “ಪವಿತ್ರ” ಎಂದು ಏಕೆ ಕರೆಯುತ್ತಾರೆ ?*


🌀ದರ್ಬೆ, ಕುಶ, ಬರ್ಹಿ, ಇವುಗಳು ಪವಿತ್ರ ದರ್ಬೆಯ ವಿವಿಧ ನಾಮಗಳು.  ಒಮ್ಮೆ ಗರುಡನು  ತನ್ನ ತಾಯಿಯಾದ ವಿನುತೆಗೆ, ಸರ್ಪಗಳ ತಾಯಿಯಾದ ಕದೃವಿನಿಂದ ಮುಕ್ತಿ  ಪಡೆಯಲು, ದೇವೇಂದ್ರನಿಂದ ಅಮೃತವನ್ನು ಪಡೆದು ಅದನ್ನು ಸರ್ಪಗಳಿಗೆ ನೀಡುವುದಕ್ಕಾಗಿ ಸ್ನಾನ ಮಾಡಿ ಶುದ್ಧವಾಗಿ ಬರಲು ಹೇಳುತ್ತಾನೆ. ಮತ್ತು ಆ‌ ಸರ್ಪಗಳು ಪುನಃ: ಬರುವವರೆಗೂ ಅಮೃತವನ್ನು ದರ್ಬೆಮೇಲೆ ಇಟ್ಟಿರುತ್ತಾನೆ.  ಅಷ್ಟರಲ್ಲಿ ದೇವೇಂದ್ರನು ಬಂದು  ಅಮೃತವನ್ನು ಹೊತ್ತುಕೊಂಡು ಹೋಗುವಾಗ ಅಮೃತದ ಒಂದು ಬಿಂದು ದರ್ಬೆಯ ಮೇಲೆ ಬೀಳುತ್ತದೆ.  ಆದ್ದರಿಂದ ದರ್ಬೆಯು ಶುದ್ಧವಾಗಿದೆ ಮತ್ತು ಪವಿತ್ರವೆನಿಸಿದೆ. 


🌸 *ಶ್ರಾದ್ಧದಲ್ಲಿ ಒಟ್ಟು 5 ಪವಿತ್ರಗಳ ಧಾರಣೆ ಇದೆ.*


🌀1. ಆರಂಭದಲ್ಲಿ 1 ಪವಿತ್ರ ಧಾರಣೆ, ಪಾದಪ್ರಕ್ಷಾಲನ ನಂತರ ವಿಸರ್ಜನೆ.


🌀2. ಪಾದ ಪ್ರಕ್ಷಾಲನ ಬಳಿಕ ಮತ್ತೊಂದು ಪವಿತ್ರ ಧಾರಣೆ. ಪಿಂಡ ಆಘ್ರಾಣದ ತರುವಾಯ ವಿಸರ್ಜನೆ.


🌀3. ಆಘ್ರಾಣವಾದ ಮೇಲೆ ಇನ್ನೊಂದು ಪವಿತ್ರ ಧಾರಣೆ ಉಚ್ಚಷ್ಟ ಪಿಂಡ ಪ್ರದಾನ ನಂತರ ವಿಸರ್ಜನೆ


🌀4. ಉಚ್ಚಷ್ಟ ಪಿಂಡ ಪ್ರದಾನ ನಂತರ ಮತ್ತೊಂದು ಪವಿತ್ರ ಧಾರಣೆ ಇದು ಶ್ರಾದ್ಧಾಂತ್ಯದಲ್ಲಿ ವಿಸರ್ಜನೆ.


🌀5. ಕೃಷ್ಣಾರ್ಪಣ ನಂತರ ಇನ್ನೊಂದು ಪವಿತ್ರ ಧಾರಣೆ ಅದು ಪರಿಹನಿ ತರ್ಪಣ ನಂತರ ವಿಸರ್ಜನೆ.

No comments:

Post a Comment